` karnataka ratna, - chitraloka.com | Kannada Movie News, Reviews | Image

karnataka ratna,

  • ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ

    ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ

    ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ  ಮಂಡಳಿ ಏರ್ಪಡಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನೀತ್ ಅವರಿಗೆ ಕರ್ನಾಟಕ ರತ್ನ ಘೋಷಿಸಿದರು. 

    ಈ ಪ್ರಶಸ್ತಿ ಪಡೆಯುತ್ತಿರುವ 10ನೇ ಹೆಮ್ಮೆಯ ಕನ್ನಡಿಗ ಪುನೀತ್ ರಾಜ್ ಕುಮಾರ್. 1992ರಲ್ಲಿ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾಗಿತ್ತು. ಆ ಪ್ರಶಸ್ತಿ ಪಡೆದ ಮೊದಲಿಗರು ಕುವೆಂಪು ಮತ್ತು ಡಾ.ರಾಜ್ ಕುಮಾರ್. ನನಗಿಂತ ಕುವೆಂಪು ಅವರು ಈ ಪ್ರಶಸ್ತಿಗೆ ಅರ್ಹರು ಎಂದಿದ್ದ ಡಾ.ರಾಜ್, ಪ್ರಶಸ್ತಿ ಪ್ರದಾನ ಮೊದಲಿಗೆ ಕುವೆಂಪು ಅವರಿಗೇ ಆಗಬೇಕು ಎಂದು ಪಟ್ಟು ಹಿಡಿದಿದ್ದರು. ಹೀಗಾಗಿ ಆಗ ಅನಾರೋಗ್ಯದಿಂದಾಗಿ ಹಾಸಿಗೆಯಲ್ಲಿದ್ದ ಕುವೆಂಪು ಅವರಿಗೆ ಮನೆಯಲ್ಲಿಯೇ  ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ನಂತರ ಡಾ.ರಾಜ್ ವೇದಿಕೆಗೆ ಬಂದು ಗೌರವ ಸ್ವೀಕರಿಸಿದ್ದರು.

    ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ, , ಡಾ.ದೇವಿಶೆಟ್ಟಿ, ಶಿವಕುಮಾರ ಸ್ವಾಮೀಜಿ, ದೇ.ಜವರೇಗೌಡ ಮತ್ತು ವೀರೇಂದ್ರ ಹೆಗ್ಗಡೆ, ಭಾರತ ರತ್ನ ಪುರಸ್ಕೃತರೂ ಆಗಿರುವ ವಿಜ್ಞಾನಿ ಸಿಎನ್ಆರ್ ರಾವ್ ಹಾಗೂ  ಭೀಮ್ಸೇನ್ ಜೋಷಿ ಇದಕ್ಕೂ ಮೊದಲು ಕರ್ನಾಟಕ ರತ್ನ ಗೌರವಕ್ಕೆ ಪಾತ್ರರಾದ ಹೆಮ್ಮೆಯ ಕನ್ನಡಿಗರು.

  • ನವೆಂಬರ್ 01. ಸಂಜೆ 5 ಗಂಟೆಗೆ ವಿಧಾನಸೌಧದ ಎದುರು.. ಕರ್ನಾಟಕ ರತ್ನ

    ನವೆಂಬರ್ 01. ಸಂಜೆ 5 ಗಂಟೆಗೆ ವಿಧಾನಸೌಧದ ಎದುರು.. ಕರ್ನಾಟಕ ರತ್ನ

    ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪುರಸ್ಕಾರ ಘೋಷಿಸಿದ್ದ ಸರ್ಕಾರ, ನವೆಂಬರ್ 1ರ ರಾಜ್ಯೋತ್ಸವ ದಿನದಂದು ಪ್ರಶಸ್ತಿ ಪ್ರದಾನ ಮಾಡುವುದಕ್ಕೆ ಸಜ್ಜಾಗಿದೆ. ಅಕ್ಟೋಬರ್ 28ಕ್ಕೆ ಗಂಧದ ಗುಡಿ ದರ್ಶನ. ಅ.29ಕ್ಕೆ ಪುಣ್ಯಸ್ಮರಣೆ. ನವೆಂಬರ್ 1ಕ್ಕೆ ರಾಜ್ಯೋತ್ಸವ ಮತ್ತು ಕರ್ನಾಟಕ ರತ್ನ. ಕಾರ್ಯಕ್ರಮದ ವಿವರಗಳನ್ನು ಖುದ್ದು ಬಸವರಾಜ ಬೊಮ್ಮಾಯಿ ನೀಡಿದ್ದಾರೆ.

    ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ಭಾಷೆ ಸಂಸ್ಕೃತಿಗೆ ಪುನೀತ್ ರಾಜ್ಕುಮಾರ್ ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ಅವರು ನಿಜವಾದ ಕರ್ನಾಟಕ ರತ್ನ.

    ಅವರು ಸದಾಕಾಲ ಯುವಜನರಿಗೆ ಪ್ರೇರಣೆಯಾಗಿರಬೇಕು ಎಂಬ ಮಹಾದಾಸೆಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ನವೆಂಬರ್ 1ರಂದು ಸಂಜೆ 5 ಗಂಟೆಗೆ ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾರಂಭ ನಡೆಯಲಿದೆ. ಶ್ರೇಷ್ಠ ಸಾಹಿತಿಗಳು, ಖ್ಯಾತ ಚಲನಚಿತ್ರ ನಟರು, ಶಾಸಕರು, ಹಿರಿಯ ಸಾಧಕರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.  ನವೆಂಬರ್ 1ರ ನಂತರ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಒಟ್ಟು 3 ಕಾರ್ಯಕ್ರಮಗಳನ್ನು ಸುಮಾರು 10 ದಿನಗಳ ಕಾಲ ಆಯೋಜಿಸಲಾಗುವುದು ಎಂದು  ಬಸವರಾಜ ಬೊಮ್ಮಾಯಿ ತಿಳಿಸಿದರು.

  • ವಿಷ್ಣುವರ್ಧನ್`ಗೆ ಕರ್ನಾಟಕ ರತ್ನ : ಸಿಎಂ ಬೊಮ್ಮಾಯಿ ಸುಳಿವು

    ವಿಷ್ಣುವರ್ಧನ್`ಗೆ ಕರ್ನಾಟಕ ರತ್ನ : ಸಿಎಂ ಬೊಮ್ಮಾಯಿ ಸುಳಿವು

    ಮೈಸೂರಿನಿನಿಂದ ಹೆಚ್.ಡಿ.ಕೋಟೆಗೆ ಹೋಗುವ ಮಾರ್ಗ ಮಧ್ಯೆ ಹಾಲಾಳು ಎಂಬ ಗ್ರಾಮವಿದೆ. ಅಲ್ಲಿ ಸುಮಾರು 11 ಎಕರೆಯಷ್ಟು ವಿಸ್ತಾರವಾದ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ. 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಮಾರಕವಿದು. ಸ್ಮಾರಕ ಉದ್ಘಾಟನೆಗೆ ಅಭಿಮಾನಿಗಳು ಭವ್ಯ ಮೆರವಣಿಗೆ ನಡೆಸಿದ್ರು. ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಸ್ಮಾರಕ ಸ್ಥಳಕ್ಕೆ ಅಭಿಮಾನಿಗಳು ಬೈಕ್ ಱಲಿ ಮೂಲಕ ತೆರಳಿದ್ರು. ಈ ವೇಳೆ ವಿಷ್ಣುವರ್ಧನ್ ಗೀತೆಗಳಿಗೆ ಫ್ಯಾನ್ಸ್ ಭರ್ಜರಿ ಡ್ಯಾನ್ಸ್ ಮಾಡಿದ್ದು, ಸಾಹಸ ಸಿಂಹನ ಪರ ಜೈಕಾರ ಕೂಗಿ ಸಂಭ್ರಮಿಸಿದ್ರು. ಹಲವು ವರ್ಷಗಳ ನಂತರ ನಮ್ಮ ಆಸೆ ಈಡೇರುತ್ತಿದೆ. ವಿಷ್ಣು ಸ್ಮಾರಕ ಮಾಡಿದ ಸರ್ಕಾರಕ್ಕೆ ಅಭಿನಂದನೆಗಳು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಸಂಭ್ರಮಿಸಿದರು.

    ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. . ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿದೆ .ವಿಶೇಷವಾದ ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ.ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ 600ಕ್ಕೂ ಹೆಚ್ಚು ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ನೋಡಬಹುದಾಗಿದೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಷ್ಣುವರ್ಧನ್ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಆಡಿಟೋರಿಯಂ ಕೂಡ ಇಲ್ಲಿ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತು ನಾಟಕಗಳ ಚಟುವಟಿಕೆ ನಡೆಸುವ ಕುರಿತು ವಿಷ್ಣು ಕುಟುಂಬಸ್ಥರು ಯೋಜನೆ ರೂಪಿಸಿದ್ದಾರೆ.

    ಭಾರತಿ ವಿಷ್ಣುವರ್ಧನ್, ಅನಿರುದ್ಧ, ಪುತ್ರಿ ಕೀರ್ತಿ ವಿಷ್ಣುವರ್ಧನ್ ಹಾಗೂ ಸಾವಿರಾರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ವಿಷ್ಣುವರ್ಧನ್ ಅವರನ್ನು ಮನಸಾರೆ ಹೊಗಳಿಸಿದರು. 13 ವರ್ಷಗಳ ನಂತರ ನಿರ್ಮಾಣವಾಗಿರುವ ಈ ಸ್ಮಾರಕ ಪ್ರವಾಸಿ ತಾಣವಾಗಬೇಕು ಎಂದರು. ಪುಟ್ಟ ಮಗುವೊಂದು ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂಬ ಮನವಿಯಿಟ್ಟರು. ಇವುಗಳಿಗೆ ವೇದಿಕೆಯಲ್ಲಿಯೇ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ನೀವು ಬೋರ್ಡ್‍ಗಳ ಮೂಲಕ ಇಟ್ಟಿರುವ ಬೇಡಿಕೆಯನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಶೀಲನೆ ಮಾಡಲಿದೆ ಎಂದರು. ಇದುವರೆಗೆ 10 ಮಂದಿಗೆ ಕರ್ನಾಟಕ ರತ್ನ ನೀಡಲಾಗಿದೆ. ಚಿತ್ರರಂಗದಿಂದ ಇಬ್ಬರು ಕರ್ನಾಟಕ ರತ್ನ ಪುರಸ್ಕøತರು. ಡಾ.ರಾಜ್ ಹಾಗೂ ಮರಣೋತ್ತರವಾಗಿ ಡಾ.ಪುನೀತ್ ರಾಜಕುಮಾರ್ ಕರ್ನಾಟಕ ರತ್ನ ಗೌರವಕ್ಕೆ ಪಾತ್ರರಾಗಿದ್ದಾರೆ.