ಹುಟ್ಟುಹಬ್ಬದ ಸಂಭ್ರಮದಲ್ಲಿರೋ ಭಾವ ಶ್ರೀಮುರಳಿಗೆ ಪ್ರಶಾಂತ್ ನೀಲ್ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ. ಶ್ರೀಮುರಳಿಯ ಹೊಸ ಚಿತ್ರಕ್ಕೆ ಅವರೇ ಕಥೆ ಬರೆದಿರುವುದಷ್ಟೇ ಅಲ್ಲ, ಸ್ವತಃ ನಿರ್ಮಾಪಕರೂ ಆಗುತ್ತಿದ್ದಾರೆ. ಮದಗಜ ನಂತರ ಆ ಚಿತ್ರ ಸೆಟ್ಟೇರಲಿದೆ.
ಲಕ್ಕಿ ಡೈರೆಕ್ಟರ್ ಸೂರಿ ನಿರ್ದೇಶನದ ಹೊಣೆ ಹೊತ್ತಿದ್ದು, ಪ್ರಶಾಂತ್ ನೀಲ್ ಅವರ ಸ್ವರ್ಣಲತಾ ಪ್ರೊಡಕ್ಷನ್ಸ್ನಲ್ಲಿ ಸಿನಿಮಾ ಸೆಟ್ಟೇರಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ಸಿನಮಾ ಉಗ್ರಂ. ಅದು ಶ್ರೀಮುರಳಿಗೆ ದೊಡ್ಡ ಬ್ರೇಕ್ ಕೊಟ್ಟಿದ್ದ ಸಿನಿಮಾ. ಅದಾದ ನಂತರ ನಿರ್ದೇಶಿಸಿದ ಕೆಜಿಎಫ್, ದೇಶಾದ್ಯಂತ ಸದ್ದು ಮಾಡಿದೆ.