ಕೆಜಿಎಫ್ ಚಾಪ್ಟರ್ 2 ಚಿತ್ರದ ವಿರುದ್ಧ ದಾಖಲಾಗಿದ್ದ ಅರ್ಜಿಯೊಂದನ್ನು ಹೈಕೋರ್ಟ್ ವಜಾ ಮಾಡಿದೆ. ಹುಬ್ಬಳ್ಳಿಯ ಸಿ.ಶಿವಶಂಕರ್ ಎಂಬ ವ್ಯಕ್ತಿ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರು ಕೊಟ್ಟಿದ್ದ ಕಾರಣವೂ ವಿಚಿತ್ರವಾಗಿತ್ತು. ಚಿತ್ರದಲ್ಲಿ ಸಂಜಯ್ ದತ್ ನಟಿಸುತ್ತಿದ್ದು, ಆತನೊಬ್ಬ ದೇಶದ್ರೋಹಿ. ಅಂತಹವನು ಕರ್ನಾಟಕಕ್ಕೇ ಕಾಲಿಡಬಾರದು. ಕನ್ನಡ ಸಿನಿಮಾಗಳಲ್ಲಿ ನಟಿಸಬಾರದು ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಮುಂಬೈ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆ ಅನುಭವಿಸಿರುವ ಸಂಜಯ್ ದತ್, 2016ರಲ್ಲಿ ರಿಲೀಸ್ ಆಗಿದ್ದಾರೆ. ಆದರೆ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ ಎಂದಿರುವ ಹೈಕೋರ್ಟ್, ಅರ್ಜಿಯನ್ನು ವಜಾ ಮಾಡಿದೆ.